alex Certify BIG NEWS: ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್; ಕ್ಷೇತ್ರ ತ್ಯಾಗಕ್ಕೆ ಸೂಚಿಸಿಲ್ಲ ಎಂದ ಸಚಿವ ಆನಂದ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್; ಕ್ಷೇತ್ರ ತ್ಯಾಗಕ್ಕೆ ಸೂಚಿಸಿಲ್ಲ ಎಂದ ಸಚಿವ ಆನಂದ್ ಸಿಂಗ್

ಹೊಸಪೇಟೆ: ಮಗ ಸಿದ್ಧಾರ್ಥಗೆ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಕ್ಷೇತ್ರ ತ್ಯಾಗ ಎಂಬ ಚರ್ಚೆ ವಿಚಾರವಾಗಿ ಮಾತನಾಡಿರುವ ಸಚಿವ ಆನಂದ್ ಸಿಂಗ್, ಕ್ಷೇತ್ರ ತ್ಯಾಗ ಮಾಡುವಂತೆ ಪಕ್ಷ ಯಾವುದೇ ಸೂಚಿನೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲ ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗಲ್ಲ. ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಕ್ಷೇತ್ರದ ಜನ ಸಿದ್ಧಾರ್ಥ್ ಗೆ ಟಿಕೆಟ್ ಸಿಕ್ಕಿದ ಉತ್ಸಾಹದಲ್ಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಅಳೆದು ತೂಗಿ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ ಮಾಡೆಲ್ ಜಾರಿ ಬಗ್ಗೆಯೂ ನನಗೆ ಗೊತ್ತಿಲ್ಲ. ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್ ನೀಡಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...