alex Certify BIG NEWS: ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಬಿ.ವೈ ವಿಜಯೇಂದ್ರ; ಅಚ್ಚರಿ ಮೂಡಿಸಿದ ಸಚಿವ ನಾರಾಯಣಗೌಡ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಬಿ.ವೈ ವಿಜಯೇಂದ್ರ; ಅಚ್ಚರಿ ಮೂಡಿಸಿದ ಸಚಿವ ನಾರಾಯಣಗೌಡ ಹೇಳಿಕೆ

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಯಾರಿರಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲಕಾರಿ ಚರ್ಚೆಗಳು ಬಿಜೆಪಿ ವಲಯದಲ್ಲಿ ಆರಂಭವಾಗಿದೆ. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರನ್ನು ಪ್ರಸ್ತಾಪಿಸುವ ಮೂಲಕ ಸಚಿವ ನಾರಾಯಣಗೌಡ ಅಚ್ಚರಿ ಮೂಡಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿರುವ ಬೆನ್ನಲ್ಲೇ ಸಚಿವ ನಾರಾಯಣಗೌಡ ಹೇಳಿಕೆ ಕುತೂಹಲ ಮೂಡಿಸಿದೆ.

ಮೈಸೂರು ಭಾಗದಲ್ಲಿ ಬಿ.ವೈ.ವಿಜಯೇಂದ್ರ ಸಾರಥ್ಯದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ಮಂಡ್ಯದಲ್ಲಿ 5 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಲಿದ್ದು, ವಿಜಯೇಂದ್ರಗೆ ಮುಂದಿನ ಮುಖ್ಯಮಂತ್ರಿಯಾಗುವ ಎಲ್ಲಾ ಲಕ್ಷಣಗಳು ಇವೆ. ಹಾಗಾಗಿ ಸಿಎಂ ರೇಸ್ ನಲ್ಲಿ ಬಿ.ವೈ.ವಿಜಯೇಂದ್ರ ಕೂಡ ಇದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...