alex Certify BIG NEWS: ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಸಚಿವ ಆನಂದ್ ಸಿಂಗ್ ದಿಢೀರ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಸಚಿವ ಆನಂದ್ ಸಿಂಗ್ ದಿಢೀರ್ ಭೇಟಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಚರ್ಚೆ ಮಧ್ಯೆಯೇ ರಾಜ್ಯ ರಾಜಕೀಯದಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತಿದ್ದು, ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿರುವ ಆನಂದ್ ಸಿಂಗ್, ಮಹತ್ವದ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿಯನ್ನ ಹಾಡಿ ಹೊಗಳಿದ ತಮಿಳುನಾಡು ಸಿಎಂ

ಮೊನ್ನೆಯಷ್ಟೇ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆಗೆ ತೆರಳಿ, ಅವರನ್ನು ಭೇಟಿಯಾಗಿದ್ದ ಸಚಿವ ಆನಂದ್ ಸಿಂಗ್, ಕೆಲ ಕಾಲ ಮಾತುಕತೆ ನಡೆಸಿದ್ದರು. ಇದು ಆನಂದ್ ಸಿಂಗ್ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರಾ ? ಎಂಬ ಚರ್ಚೆಗೆ ಕೂಡ ಕಾರಣವಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಇದೀಗ ಆನಂದ್ ಸಿಂಗ್, ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲ ಇಮ್ಮಡಿಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...