alex Certify BIG NEWS: ಮುಖ್ಯಮಂತ್ರಿ ಸ್ಥಾನ ಮುಳ್ಳಿನ ಹಾಸಿಗೆ ಇದ್ದಂತೆ; ಸಿಎಂ ನಿರ್ಧಾರದ ಮೇಲೆ ನನ್ನ ನಡೆ ತೀರ್ಮಾನ; ಪರೋಕ್ಷ ಎಚ್ಚರಿಕೆ ಕೊಟ್ಟ ಆನಂದ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯಮಂತ್ರಿ ಸ್ಥಾನ ಮುಳ್ಳಿನ ಹಾಸಿಗೆ ಇದ್ದಂತೆ; ಸಿಎಂ ನಿರ್ಧಾರದ ಮೇಲೆ ನನ್ನ ನಡೆ ತೀರ್ಮಾನ; ಪರೋಕ್ಷ ಎಚ್ಚರಿಕೆ ಕೊಟ್ಟ ಆನಂದ್ ಸಿಂಗ್

ಬೆಂಗಳೂರು: ನನ್ನ ಬೇಡಿಕೆ, ನಡೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ಯಡಿಯೂರಪ್ಪ ಸಿಎಂ ಆಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಸಿಎಂ ಆಗಿ ಇಲ್ಲ. ಹಾಗಾಗಿ ಪರಿಸ್ಥಿತಿ ಬದಲಾಗಿದೆ. ಹಾಗಾಗಿ ನನ್ನ ಬೇಡಿಕೆಯನ್ನು ಸಿಎಂ ಗೆ ತಿಳಿಸಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ಆನಂದ್ ಸಿಂಗ್, ನನ್ನ ಬೇಡಿಕೆ ಏನೆಂದು ಬಹಿರಂಗವಾಗಿ ಹೇಳಲು ಹೋಗಲ್ಲ. ನನ್ನ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿಗೆ ತಿಳಿಸಿದ್ದೇನೆ. ಸಿಎಂ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ಮುಂದಿನ ನಡೆ ತೀರ್ಮಾನವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷ ರಾಜೀನಾಮೆ ಎಚ್ಚರಿಕೆ ನೀಡಿದ್ದಾರೆ.

ಮೃತಪಟ್ಟ ಮಂಗಕ್ಕೆ ಅಂತ್ಯಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು

ಮುಖ್ಯಮಂತ್ರಿ ಸ್ಥಾನ ಎಂಬುದು ಮುಳ್ಳಿನ ಹಾಸಿಗೆ ಇದ್ದಂತೆ ಎಂಬುದು ನನಗೂ ಗೊತ್ತು. ಹಲವರು ಕಾಯುತ್ತಿರುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಬೇಡಿಕೆ ಇರುತ್ತೆ, ಸಿಎಂಗೆ ಒತ್ತಡವಿರುತ್ತೆ ಎಂಬ ಅರಿವಿದೆ. ಆದರೆ ನಾಯಕತ್ವ ಬದಲಾವಣೆಯಾಗಿರುವುದರಿಂದ ನಾವು ಕೂಡ ಬದಲಾವಣೆ ಬಯಸಿದ್ದೇವೆ. ಹಾಗಾಗಿ ನಮ್ಮ ಬೇಡಿಕೆ ಏನು ಎಂಬುದನ್ನು ಸಿಎಂ ಗೆ ತಿಳಿಸಿದ್ದೇವೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಸಿಎಂ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಎಲ್ಲವೂ ನಿಂತಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...