alex Certify BIG NEWS: ಮುತಾಲಿಕ್ ರಂತವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು; ಸಂಘರ್ಷಕ್ಕೆ ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು; HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುತಾಲಿಕ್ ರಂತವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು; ಸಂಘರ್ಷಕ್ಕೆ ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು; HDK ಆಕ್ರೋಶ

ಬಾದಾಮಿ: ರಾಜ್ಯದಲ್ಲಿ ಆರಂಭವಾಗಿರುವ ಆಜಾನ್ ವಿರುದ್ಧದ ಸುಪ್ರಭಾತ ಅಭಿಯಾನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ಮೊದಲು ಪ್ರಮೋದ್ ಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಪ್ರಮೋದ್ ಮುತಾಲಿಕ್ ಮಾಡುತ್ತಿದ್ದಾರೆ. ಇಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಇಲ್ಲವಾದಲ್ಲಿ ಸರ್ವಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಶಾಂತಿ ಉಳಿಯಲು ಸಾಧ್ಯವಿಲ್ಲ ಎಂದರು.

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಮುತಾಲಿಕ್ ಅವರದ್ದು ಶ್ರೀರಾಮಸೇನೆಯೋ ? ರಾವಣ ಸೇನೆಯೋ ? ಎಂದು ಪ್ರಶ್ನಿಸಿರುವ ಹೆಚ್.ಡಿ.ಕೆ, ಅನಗತ್ಯವಾಗಿ ಧಾರ್ಮಿಕ ಸಂಘರ್ಷಗಳನ್ನು ಹುಟ್ಟುಹಾಕಿ, ಶಾಂತಿ ಕದಡುವ ವಾತಾವರಣ ಸೃಷ್ಟಿಸಲಾಗುತ್ತಿದೆ. ಇಂತಹ ಘಟನೆ ನಡೆಯುತ್ತಿದ್ದರು ಸರ್ಕಾರ ಕ್ರಮ ಕೈಗೊಳ್ಳದೇ ಸುಮ್ಮನಿರುವುದು ಯಾಕೆ ? ಸರ್ಕಾರ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ವಿಷಬೀಜ ಬೆಳೆಯಲು ಬಿಡಬಾರದು ಎಂದು ಹೇಳಿದರು.

ಧ್ವನಿವರ್ಧಕಗಳಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ಒಪ್ಪಿಗೆ ಕೊಡಲಿ. ಆ ಪ್ರಕಾರ ಹನುಮಾನ್ ಚಾಲೀಸಾ ಇವರು ಕೂಡ ಓದಲಿ. ಅದಕ್ಕೆ ದೊಡ್ಡ ಪ್ರಚಾರ ಬೇಕಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...