alex Certify BIG NEWS: ಮುನಿಸು ಮರೆತು ಒಂದಾದ ಸಿದ್ದರಾಮಯ್ಯ-ಡಿಕೆಶಿ; ಒಂದೇ ಕಾರಿನಲ್ಲಿ ಜೊತೆ ಜೊತೆಯಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುನಿಸು ಮರೆತು ಒಂದಾದ ಸಿದ್ದರಾಮಯ್ಯ-ಡಿಕೆಶಿ; ಒಂದೇ ಕಾರಿನಲ್ಲಿ ಜೊತೆ ಜೊತೆಯಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡ ನಾಯಕರು

ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಪ್ರಯುಕ್ತ ನಡೆದ ಸಿದ್ದರಾಮೋತ್ಸವ ಕಾರ್ಯಕ್ರದ ನಂತರ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವಿನ ಮುನಿಸು ಮರೆತು ಒಂದಾಗಿ ಕಾಣಿಸಿಕೊಂಡಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಯೋಜಿಸಲಾಗಿರುವ ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಯಾಗಿ ಕಾಣಿಸಿಕೊಂಡಿದ್ದು, ಕೈವಾರ ಕ್ರಾಸ್ ನಿಂದ ಚಿಂತಾಮಣಿವರೆಗೂ ನಡೆದ ಮೆರವಣಿಗೆಯಲ್ಲಿ ಒಂದೇ ವಾಹನದಲ್ಲಿ ತೆರಳಿ ಗಮನ ಸೆಳೆದಿದ್ದಾರೆ.

ಇದಕ್ಕೂ ಮುನ್ನ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಹೆಚ್.ಕ್ರಾಸ್ ಬಳಿ ಆಗಮಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸೇಬು ಹಣ್ಣಿನ ಹಾರ ಹಾಕಿ ಅದ್ದೂರಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ ಹಾರದಲ್ಲಿದ್ದ ಸೇಬು ಹಣ್ಣನ್ನು ಡಿ.ಕೆ.ಶಿವಕುಮಾರ್ ಅವರು ಕಿತ್ತು ತಿಂದಿದ್ದು, ಉಬಯ ನಾಯಕರನ್ನು ಕಂಡು ಕೈ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...