alex Certify BIG NEWS: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿದರೆ ಮಾತ್ರ ಮಾತುಕತೆ; ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿದರೆ ಮಾತ್ರ ಮಾತುಕತೆ; ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿದರೆ ಮಾತ್ರ ಮಾತುಕತೆ ನಡೆಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಿಗೆ ಸಚಿವರು ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ದುರಾದೃಷ್ಟ. ಇದರಿಂದಾಗಿ ಲಕ್ಷಾಂತರ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಆದಾಗ್ಯೂ ಸಾರಿಗೆ ನೌಕರರು ತಮ್ಮ ಪಟ್ಟು ಬಿಡದೇ ಪ್ರತಿಭಟನೆಯಲ್ಲಿ ತೊಡಗಿರುವುದು ಸರಿಯಲ್ಲ.

ನೌಕರರು ಮುಷ್ಕರ ಬಿಟ್ಟು ಕೆಲಸಕ್ಕೆ ಮರಳಿದರೆ ಮಾತ್ರ ಸರ್ಕಾರ ಮಾತುಕತೆಗೆ ಸಿದ್ಧ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...