alex Certify BIG NEWS: ಮೇಕೆದಾಟು ಯೋಜನೆಗಾಗಿ ರೈತರ ಪ್ರತಿಭಟನೆ; ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಕೆದಾಟು ಯೋಜನೆಗಾಗಿ ರೈತರ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ರಾಮನಗರ ಜಿಲ್ಲೆಯ ಸಂಗಮದ ಬಳಿ ರೈತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದು, ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ವಿವಿಧ ರೈತಪರ ಸಂಘಟನೆಗಳು ಇಂದು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿ ಗುದ್ದಲಿ ಪೂಜೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿ ಗೊಳಿಸಿದ್ದಾರೆ.

ಒಂದೆಡೆ ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಮೇಕೆದಾಟು ಹೋರಾಟ ಸಮಿತಿ ದೆಹಲಿ ಚಲೋ ಆರಂಭಿಸಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಆರಂಭಿಸಲಿದೆ. ಇದರ ಬೆನ್ನಲ್ಲೇ ವಿವಿಧ ರೈತ ಸಂಘಟನೆಗಳು ಸಂಗಮದ ಬಳಿ ಗುದ್ದಲಿ ಪೂಜೆ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...