alex Certify BIG NEWS: ಮೇಲುಕೋಟೆಗೆ ಬಂದು ಆಣೆ-ಪ್ರಮಾಣ ಮಾಡಲಿ; JDS ಶಾಸಕರಿಗೆ ಪಂಥಾಹ್ವಾನ ನೀಡಿದ ಸಂಸದೆ ಸುಮಲತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಲುಕೋಟೆಗೆ ಬಂದು ಆಣೆ-ಪ್ರಮಾಣ ಮಾಡಲಿ; JDS ಶಾಸಕರಿಗೆ ಪಂಥಾಹ್ವಾನ ನೀಡಿದ ಸಂಸದೆ ಸುಮಲತಾ

ಮಂಡ್ಯ: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ವಾಕ್ಸಮರ ಮುಂದುವರೆದಿದ್ದು, ಜೆಡಿಎಸ್ ಶಾಸಕರೆಲ್ಲರೂ ಬಂದು ಮೇಲುಕೋಟೆಯಲ್ಲಿ ಆಣೆ-ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ಟೆಂಡರ್ ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ದು, ಜೆಡಿಎಸ್ ನ 6 ಶಾಸಕರು ಮೆಲುಕೋಟೆ ಚಲುವನಾರಾಯಣ ಸ್ವಾಮಿ ಸನ್ನಿಧಿಗೆ ಬರಲಿ. ಶಾಸಕರು ತಮ್ಮ ಸಮಯ ಹೇಳಿದರೆ ಸಾಕು. ನಾನು ಅದೇ ಸಮಯಕ್ಕೆ ಮೇಲುಕೋಟೆಗೆ ಬರುತ್ತೇನೆ. ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರು ಆಣೆ ಮಾಡಲಿ ಎಂದರು.

ಇದೇ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸುಮಲತಾ, ಜನರ ಸಮಸ್ಯೆ ಆಲಿಸಲು ಸ್ಥಳಕ್ಕೆ ಬಾರದ ಪ್ರಾಧಿಕಾರದ ಅಧಿಕಾರಿ ಶ್ರೀಧರ್ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...