alex Certify BIG NEWS: ಮೈಸೂರು ಕಟ್ಟಿದ್ದೇ ನಾನು ಎಂದು ಹೇಳಿದರೂ ಅಚ್ಚರಿಯಿಲ್ಲ; ಪ್ರತಾಪ್ ಸಿಂಹ ವಿರುದ್ಧ ಮತ್ತೆ ಕಿಡಿಕಾರಿದ ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ಕಟ್ಟಿದ್ದೇ ನಾನು ಎಂದು ಹೇಳಿದರೂ ಅಚ್ಚರಿಯಿಲ್ಲ; ಪ್ರತಾಪ್ ಸಿಂಹ ವಿರುದ್ಧ ಮತ್ತೆ ಕಿಡಿಕಾರಿದ ವಿಶ್ವನಾಥ್

ಮೈಸೂರು: ಮೈಸೂರು-ಬೆಂಗಳೂರು ದಶಪಥ ರಸ್ತೆ ಕ್ರೆಡಿಟ್ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್, ದಶಪಥ ಯೋಜನೆ ಹಿಂದಿನ ಸರ್ಕಾರದ್ದು ಎಂಬುದಕ್ಕೆ ದಾಖಲೆಗಳಿವೆ. ಹೀಗಿರುವಾಗ ಈ ಯೋಜನೆ ತಮ್ಮದೆಂದು ಪ್ರತಾಪ್ ಸಿಂಹ ಹೇಳಿಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯೋಜನೆ ಕ್ರೆಡಿಟ್ ನಮ್ಮದೆಂದು ಹೇಳುವ ಪ್ರತಾಪ್ ಸಿಂಹ, ಮುಂದೆ ಮೈಸೂರು ಕಟ್ಟಿದ್ದೇ ನಾನು ಎಂದು ಹೇಳಿದರೂ ಅಚ್ಚರಿಯಿಲ್ಲ. ಓರ್ವ ಸಂಸದರಾಗಿ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ಗುಡುಗಿದರು.

ʼಡಿ ಬಾಸ್ʼ ಅಭಿಮಾನಿಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 10ರಂದು ದರ್ಶನ್ 55ನೇ ಸಿನಿಮಾದ ಟೈಟಲ್ ರಿವೀಲ್

ಇದೇ ವೇಳೆ ಸಂಪುಟದಲ್ಲಿ ಉಳಿದ ನಾಲ್ಕು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿದ ಅವರು, ಆದಷ್ಟು ಬೇಗ ಖಾತೆ ಹಂಚಿಕೆ ಮಾಡಲಿ. ಅಧಿವೇಶನ ಮುಗಿದ ಬಳಿಕ ಖಾತೆ ಹಂಚಿಕೆ ಮಾಡಲಿದ್ದಾರೆ ಎನಿಸುತ್ತಿದೆ. ಬಿ ಎಸ್ ವೈ ಸರ್ಕಾರ ಕನೆಕ್ಟಿಂಗ್ ಫ್ಯಾಮಿಲಿ ಆಗಿತ್ತು. ಬೊಮ್ಮಾಯಿ ಸರ್ಕಾರ ಕನೆಕ್ಟಿಂಗ್ ಪೀಪಲ್ ಆಗಿದೆ. ಬೊಮ್ಮಾಯಿ, ಯಡಿಯೂರಪ್ಪ ನೆರಳಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...