alex Certify BIG NEWS: ಮೊದಲಿನ ಬಿಜೆಪಿ ಈಗಿಲ್ಲ; ಲಿಂಗಾಯಿತರನ್ನು ಹಣಿಯಲು ಷಡ್ಯಂತ್ರ; ಜಗದೀಶ್ ಶೆಟ್ಟರ್ ಗುರುತರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲಿನ ಬಿಜೆಪಿ ಈಗಿಲ್ಲ; ಲಿಂಗಾಯಿತರನ್ನು ಹಣಿಯಲು ಷಡ್ಯಂತ್ರ; ಜಗದೀಶ್ ಶೆಟ್ಟರ್ ಗುರುತರ ಆರೋಪ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ತಪ್ಪುತ್ತಿದ್ದಂತೆಯೇ ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.

ಪಕ್ಷ ತೊರೆಯುವ ತಮ್ಮ ನಿರ್ಧಾರವನ್ನು ಹುಬ್ಬಳ್ಳಿಯ ನಿವಾಸದಲ್ಲಿ ಘೋಷಿಸಿದ ಜಗದೀಶ್ ಶೆಟ್ಟರ್, ಮೊದಲಿನ ಬಿಜೆಪಿ ಈಗ ಉಳಿದಿಲ್ಲ. ಕೆಲವರ ಸ್ವಹಿತಾಸಕ್ತಿಗಾಗಿ ಪಕ್ಷವನ್ನು ನಾಶ ಮಾಡುತ್ತಿದ್ದಾರೆ. ಲಿಂಗಾಯಿತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಗುರುತರ ಆರೋಪ ಮಾಡಿದ್ದಾರೆ.

ಧೈರ್ಯವಿದ್ದರೆ ನಮ್ಮನ್ನು ನೇರವಾಗಿ ಎದುರಿಸಲಿ. ಅದನ್ನು ಬಿಟ್ಟು ಪರೋಕ್ಷವಾಗಿ ಹಣಿಯಲು ಯತ್ನಿಸಿದ್ದಾರೆ. ಈ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಹೇಳಿದ ಜಗದೀಶ್ ಶೆಟ್ಟರ್, ರಾಜೀನಾಮೆ ನೀಡಿದ ಬಳಿಕ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಘೋಷಿಸುತ್ತೇನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...