alex Certify BIG NEWS: ಯಡಿಯೂರಪ್ಪಗೆ ಟಾಂಗ್ ನೀಡಿದ ಯತ್ನಾಳ್; ವಯಸ್ಸಾಗಿದೆ ಆರಾಮವಾಗಿರಿ, ಯಾಕೆ ಹೈರಾಣಾಗ್ತೀರಾ ಎಂದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಡಿಯೂರಪ್ಪಗೆ ಟಾಂಗ್ ನೀಡಿದ ಯತ್ನಾಳ್; ವಯಸ್ಸಾಗಿದೆ ಆರಾಮವಾಗಿರಿ, ಯಾಕೆ ಹೈರಾಣಾಗ್ತೀರಾ ಎಂದ ಶಾಸಕ

ವಿಜಯಪುರ: ಪಕ್ಷ ಸಂಘಟನೆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಹೇಳುತ್ತಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಟಾಂಗ್ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಯಸ್ಸಾಗಿದೆ ಇನ್ಮೇಲೆ ಆರಾಮವಾಗಿರಿ ಎಂದಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಹಾಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಯಾಕೆ ಹೈರಾಣಾಗ್ತೀರಾ? ಇನ್ಮೇಲೆ ಆರಾಮವಾಗಿರಿ ಎಂದು ಹೇಳಿದ್ದಾರೆ.

ಬಿ ಎಸ್ ವೈ ನೇತೃತ್ವದಲ್ಲಿ 100-104 ಸೀಟ್ ಗೆಲ್ಲುತ್ತಿದ್ದೆವು. ಈಗ ಪಕ್ಷದಲ್ಲಿ ಸೆಕೆಂಡ್ ಲೈನ್ ಲೀಡರ್ ಶಿಪ್ ಬಂದಿದೆ. ನಾವೆಲ್ಲ ಸೇರಿ 130 ಸೀಟ್ ದಾಟಿಸುತ್ತೇವೆ ಎಂದಿದ್ದಾರೆ.

ಇದೇ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ 2 ಕ್ಷೇತ್ರಗಳಲ್ಲಿ ಸ್ಪರ್ಧೆ ವಿಚಾರವಾಗಿಯೂ ಮಾತನಾಡಿದ ಯತ್ನಾಳ್, ಬಿಜೆಪಿಯಲ್ಲಿ ಒಬ್ಬರಿಗೆ ಎರಡು ಕ್ಷೇತ್ರದ ಟಿಕೆಟ್ ನೀಡಲ್ಲ. ನರೇಂದ್ರ ಮೋದಿಯವರಿಗೆ ಒಮ್ಮೆ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶ ಕೊಟ್ಟಿದ್ದರು. ಇದನ್ನು ಬಿಟ್ಟರೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ.

ಸಿಎಂ ಬೊಮ್ಮಾಯಿ ಸಹ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಒಂದೇ ಕುಟುಂಬದವರು ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಎಂದ ಮಾತ್ರಕ್ಕೆ ಕಾರ್ಯಕರ್ತರೆಲ್ಲ ಇವರ ಮನೆ ಮುಂದೆ ಗಂಟೆ ಹೊಡೆಯಬೇಕಾ? ಎಂದು ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...