alex Certify BIG NEWS: ಯಡಿಯೂರಪ್ಪ ಸಿಎಂ ಆಗಲು ನನ್ನದೂ ಕೊಡುಗೆಯಿದೆ; ನಾನು ಪಕ್ಷದ ವಿರುದ್ಧ ಮಾತನಾಡಿಲ್ಲ ಎಂದ ಸಿ.ಪಿ.ಯೋಗೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಡಿಯೂರಪ್ಪ ಸಿಎಂ ಆಗಲು ನನ್ನದೂ ಕೊಡುಗೆಯಿದೆ; ನಾನು ಪಕ್ಷದ ವಿರುದ್ಧ ಮಾತನಾಡಿಲ್ಲ ಎಂದ ಸಿ.ಪಿ.ಯೋಗೇಶ್ವರ್

ಬೆಂಗಳೂರು: ಬಿಜೆಪಿ ಸರ್ಕಾರ ಬರಲು ನನ್ನದೂ ಅಳಿಲು ಸೇವೆಯಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ನನ್ನ ಕೊಡುಗೆಯೂ ಇದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿ.ಪಿ.ಯೋಗೇಶ್ವರ್, ಮೈತ್ರಿ ಸರ್ಕಾರ ಬೇಡವೆಂದ ಬಿ.ಎಸ್. ಯಡಿಯುರಪ್ಪನವರಿಗೆ ನಾವೆಲ್ಲರೂ ಬೆಂಬಲ ಕೊಟ್ಟಿದ್ದೇವೆ. ಯಡಿಯೂರಪ್ಪನವರು ಸಿಎಂ ಆಗಿರುವುದರ ಹಿಂದೆ ನನ್ನದೂ ಅಳಿಲು ಸೇವೆಯಿದೆ. ನಾನು ಯಾವತ್ತೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಯಡಿಯೂರಪ್ಪನವರು ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರೆಯಬೇಕು ಎಂದೇ ನಾನು ಬಯಸುತ್ತೇನೆ. ಪಕ್ಷದ ಭವಿಷ್ಯದ ಬಗ್ಗೆಯೂ ಯೋಚಿಸುತ್ತೇನೆ. ಆದರೆ ನಾನೇನೇ ಹೇಳಿದರೂ ಮಾಧ್ಯಮಗಳು ತಮಗೆ ಬೇಕಾದಂತೆ ಸುದ್ದಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧವೂ ಕಿಡಿಕಾರಿದ ಯೋಗೇಶ್ವರ್, ಡಿ.ಕೆ.ಶಿ. ಹಾಗೂ ಹೆಚ್.ಡಿ.ಕೆ. ನಮ್ಮ ಪಕ್ಷದ ಬಗ್ಗೆ ಯಾಕೆ ಹೇಳಿಕೆಗಳನ್ನು ನೀಡುತ್ತಿದ್ದಾರೆ? ಡಿ.ಕೆ.ಶಿ. ಜೈಲಿಗೆ ಹೋಗಿ ಬಂದ ಬಳಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೊಂದು ಸಲಹೆ ನೀಡುತ್ತೇನೆ ನಮ್ಮ ಪಕ್ಷದ ಸದಸ್ಯತ್ವ ಸ್ವೀಕರಿಸಲಿ ಇಲ್ಲವಾದರೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಲಿ ಅದನ್ನು ಬಿಟ್ಟು ಬಿಜೆಪಿ ಬಗ್ಗೆ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...