alex Certify BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ನಾಗೇಶ್ ಗೆ ದೇವರಿಂದಲೇ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ನಾಗೇಶ್ ಗೆ ದೇವರಿಂದಲೇ ಶಿಕ್ಷೆ

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗನಿಗೆ ವಿಧಿಯೇ ಶಿಕ್ಷೆ ವಿಧಿಸಿದಂತಿದೆ.

ಕಳೆದ 6 ತಿಂಗಳಿಂದ ಬಲಗಾಲಿನ ಗಾಯದ ಸಮಸ್ಯೆ ಎದುರಿಸುತ್ತಿದ್ದು ಗ್ಯಾಂಗ್ರೀನ್ ಲಕ್ಷಣಗಳು ಕಂಡು ಬಂದಿವೆ ಎಂದು ತಿಳಿದುಬಂದಿದೆ.

ಆರೋಪಿ ನಾಗೇಶ್ ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ. ಘಟನೆ ಬಳಿಕ ಸನ್ಯಾಸಿ ವೇಷ ಧರಿಸಿ ತಮಿಳುನಾಡಿನಲ್ಲಿ ಆಶ್ರಮವೊಂದರಲ್ಲಿ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದರು. ಆದರೆ ಈಗ ಆರೋಪಿ ನಾಗೇಶ್ ಗೆ ಗುಂಡೇಟು ತಗುಲಿದ್ದ ಸ್ಥಳದಲ್ಲಿ ರಾಡ್ ಹಾಕಿ ಬ್ಯಾಂಡೇಜ್ ಹಾಕಿದರೂ ನೋವು ಹೆಚ್ಚುತ್ತಿದೆ. ಗಾಯ ಕಡಿಮೆಯಾಗಿಲ್ಲ. ಇದು ಗ್ಯಾಂಗ್ರೀನ್ ಲಕ್ಷಣ ಇರಬಹುದು ಎನ್ನಲಾಗಿದೆ.

ಆರೋಪಿ ನಾಗೇಶ್ ವಿಕ್ಟೋರಿಯಾ ಆಸ್ಪತ್ರೆಯ ಜೈಲು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...