alex Certify BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸಂತ್ರಸ್ತೆ ಸ್ಥಿತಿ ಗಂಭೀರ; ಚಿಕಿತ್ಸಾ ವೆಚ್ಚ ಸರ್ಕಾರದಿಂದಲೇ ಭರಿಸುತ್ತೇವೆ ಎಂದ ಸಚಿವ ಡಾ.ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸಂತ್ರಸ್ತೆ ಸ್ಥಿತಿ ಗಂಭೀರ; ಚಿಕಿತ್ಸಾ ವೆಚ್ಚ ಸರ್ಕಾರದಿಂದಲೇ ಭರಿಸುತ್ತೇವೆ ಎಂದ ಸಚಿವ ಡಾ.ಸುಧಾಕರ್

ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸೆಂಟ್ ಜಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ಸ್ಥಿತಿ ವಿಚಾರಿಸಿದ ಡಾ.ಸುಧಾಕರ್, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ಘಟನೆ ನಡೆದಿದೆ. ಯುವತಿ ಮೇಲೆ ಆಸಿಡ್ ದಾಳಿ ಘಟನೆ ಆಘಾತ ತಂದಿದೆ. ಶೇ.35ರಷ್ಟು ಭಾಗ ಬರ್ನ್ ಆಗಿದೆ. ಆಕೆಯ ಸ್ಥಿತಿ ಕ್ಲಿಷ್ಟಕರವಾಗಿದೆ ಎಂದರು.

ಆತ್ಮಾಹುತಿ ಬಾಂಬ್ ದಾಳಿಗೆ ಕಾಬೂಲ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಕ್ಕೂ ಅಧಿಕ ಮಂದಿ ಸಾವು

ಯುವತಿಗೆ ಸ್ಕಿನ್ ಬ್ಯಾಂಕ್ ನಿಂದ ಸ್ಕಿನ್ ನೀಡಲಾಗುವುದು. ಸರ್ಕಾರದಿಂದ ಖರ್ಚು ವೆಚ್ಚ ಭರಿಸಲಾಗುವುದು. ನಾಗರಿಕ ಸಮಾಜದಲ್ಲಿ ಹೃದಯ ಕಲಕುವ ಘಟನೆ ಇದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...