alex Certify BIG NEWS: ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಕಿಡಿಕಾರಿದ ಬಿ.ಎಸ್.ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಕಿಡಿಕಾರಿದ ಬಿ.ಎಸ್.ಯಡಿಯೂರಪ್ಪ

ಬೆಳಗಾವಿ: ’ರೇಪ್ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂಥ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಅನೇಕ ಸಂದರ್ಭಗಳಲ್ಲಿ ದೊಡ್ಡ ದೊಡ್ಡ ಉಪದೇಶ ಕೊಡುವ, ಬುದ್ಧಿವಂತರಂತೆ ಮಾತನಾಡುವ ರಮೇಶ್ ಕುಮಾರ್ ಇಂಥ ಹೇಳಿಕೆ ನೀಡಿರುವುದು ಇಡೀ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ. ತಕ್ಷಣ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ರಮೇಶ್ ಕುಮಾರ್ ಹೇಳಿಕೆ ಖಂಡನೀಯ. ವಿಧಾನಸಭೆಯಲ್ಲಿ ಅವರು ಆಡಿರುವ ಮಾತುಗಳು ಮಹಿಳೆಯರು ತಲೆತಗ್ಗಿಸುವಂತದ್ದು, ಗೌರವಯುತ ಸ್ಥಾನದಲ್ಲಿರುವವರು ಕೀಳು ಮಟ್ಟದ ಮಾತನಾಡುವುದು ಶೋಭೆಯಲ್ಲ. ವಿಧಾನಸಭೆಯಲ್ಲಿ ಕ್ಷಮೆಯಾಚಿಸಲಿ ಎಂದು ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...