alex Certify BIG NEWS: ರಸ್ತೆಗುಂಡಿ ಮುಚ್ಚಿ ಎಂದು ಜನರು ಗೋಗರೆದರೂ ಮುಚ್ಚಿಲ್ಲ; ಈಗ ಮೋದಿ ಬರ್ತಾರೆ ಎಂದು ಗುಂಡಿ ಮುಚ್ಚಿದ್ದಾರೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆಗುಂಡಿ ಮುಚ್ಚಿ ಎಂದು ಜನರು ಗೋಗರೆದರೂ ಮುಚ್ಚಿಲ್ಲ; ಈಗ ಮೋದಿ ಬರ್ತಾರೆ ಎಂದು ಗುಂಡಿ ಮುಚ್ಚಿದ್ದಾರೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇದೆಲ್ಲ ಚುನಾವಣೆ ಗಿಮಿಕ್ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿಯವರಿಗೆ ದಿನದ 24 ಗಂಟೆ ಚುನಾವಣೆಯದ್ದೇ ಚಿಂತೆ. ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು. ಹಾಗಾಗಿ ಪ್ರಧಾನಿ ಮೋದಿ ಈಗ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು.

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಹಲವು ಜನರು ಬಲಿಯಾದರು. ರಸ್ತೆಗುಂಡಿ ಮುಚ್ಚುವಂತೆ ಜನರು ಸಾಕಷ್ಟು ಬಾರಿ ಗೋಗರೆದರೂ ಗುಂಡಿ ಮುಚ್ಚದ ಸರ್ಕಾರ ಈಗ ಪ್ರಧಾನಿ ಮೋದಿ ಬರ್ತಿದ್ದಾರೆ ಅಂತ ಗುಂಡಿ ಮುಚ್ಚುತ್ತಿದ್ದಾರೆ ಎಂದು ಹೇಳಿದರು.

ಧರ್ಮ ಹಾಗೂ ಜಾತಿ ಹೆಸರಲ್ಲಿ ರಾಜಕಾರಣ ಮಾಡಬೇಕು ಎಂದು ಬಿಜೆಪಿ ನಾಯಕರು ಅಂದುಕೊಂಡಿದ್ದರು. ಆದರೆ ರಾಜ್ಯದಲ್ಲಿ ಅದು ವಿಫಲವಾಗಿದೆ. ಚುನಾವಣೆಗಾಗಿ ಈಗ ಪದೇ ಪದೇ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ನಮ್ಮ ಅವಧಿಯಲ್ಲಿ ನಡೆದ ಕೆಲಸಗಳಿಗೆ ತಮ್ಮದೆಂದು ಹೇಳಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...