alex Certify BIG NEWS: ರಾಜಕಾರಣಿಗಳಿಂದ ಎದುರಾಳಿಗಳ ವಿಡಂಬನೆ ಸಹಜ ಎಂದ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕಾರಣಿಗಳಿಂದ ಎದುರಾಳಿಗಳ ವಿಡಂಬನೆ ಸಹಜ ಎಂದ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಬೆಳಗಾವಿಯ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ, ರೋಡ್ ಶೋ ನಡೆಸಲಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಿಂದಾಗಿ ಬೇರೆ ಪಕ್ಷಗಳ ಜೊತೆಗಿನ ನನ್ನ ಸ್ನೇಹ ಸಂಬಂಧ ಹಳಸದು ಎಂದು ಹೇಳಿದ್ದಾರೆ.

ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತನ್ನ ಬಗ್ಗೆ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಿಂದ ಬೇರೆ ಪಕ್ಷಗಳ ನಾಯಕರೊಂದಿಗಿನ ಸಂಬಂಧ ಹಾಳಾಗದು. ರಾಜಕಾರಣಿಗಳು ಎದುರಾಳಿಗಳ ಬಗ್ಗೆ ವಿಡಂಬನಾತ್ಮಕವಾಗಿ ಮಾತನಾಡುವುದು ಸಹಜ ಎಂದರು.

ಬಿಜೆಪಿ ಪರ ರೋಡ್ ಶೋ ನಡೆಸುವ ವೇಳೆ ಹೊಸ ಹೊಸ ಸಗತಿಗಳನ್ನು ಕಲಿಯುವ, ಅರಿತುಕೊಳ್ಳುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...