alex Certify BIG NEWS: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಎಂಜಿನಿಯರ್ ಯುವಕ; 48 ಗಂಟೆ ಬಳಿಕ ಮೃತದೇಹ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಎಂಜಿನಿಯರ್ ಯುವಕ; 48 ಗಂಟೆ ಬಳಿಕ ಮೃತದೇಹ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಮೊನ್ನೆ ರಾತ್ರಿ ಸುರಿದ ಭಾರಿ ಮಳೆ ಅವಾಂತರದಿಂದ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತ ದೇಹ 48 ಗಂಟೆಗಳ ಶೋಧ ಕಾರ್ಯದ ಬಳಿಕ ಪತ್ತೆಯಾಗಿದೆ.

ಮಳೆ ನೀರಿನಲ್ಲಿ ಮಿಥಿನ್ ಎಂಬ ಯುವಕ ಬೈಕ್ ಸಮೇತ ಕೊಚ್ಚಿ ಹೋಗಿದ್ದ. ನಿನ್ನೆ ಬೈಕ್ ಪತ್ತೆಯಾಗಿತ್ತು. ಆದರೆ ಯುವಕನ ಸುಳಿವಿರಲಿಲ್ಲ. ಎಸ್ ಡಿ ಆರ್ ಎಫ್ ಸಿಬ್ಬಂದಿ ನಿರಂತರವಾಗಿ ಯುವಕನಿಗಾಗಿ ಹುಡುಕಾಟ ನಡೆಸಿದ್ದರು. ಕೆ.ಆರ್.ಪುರಂನ ರಾಜಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೇಂಬ್ರಿಡ್ಜ್ ಕಾಲೇಜು ಪಕ್ಕದ ರಾಜಕಾಲುಯೆಯಲ್ಲಿ ಯುವಕನ ಶವ ಸಿಕ್ಕಿಕೊಂಡಿತ್ತು. ಘಟನಾ ಸ್ಥಳದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅದರಂತೆ ಗ್ರಾಮದ ನಿವಾಸಿಯಾಗಿರುವ ಮಿಥಿನ್ ಬೆಂಗಳೂರಿನಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಮೊನ್ನೆ ತಡರಾತ್ರಿ ಸುರಿದ ಮಳೆಯಲ್ಲಿ ದುರಂತಕ್ಕೀಡಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...