alex Certify BIG NEWS: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ; ಸೋಂಕಿನ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ; ಸೋಂಕಿನ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರ ಸೂಚನೆ

ಬೆಂಗಳೂರು: ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಶೀತ ಗಾಳಿ ಜೊತೆಗೆ ಜಡಿ ಮಳೆ ಆರಂಭವಗಿದೆ.

ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಗಾಳಿ ಮಳೆ ಇರಲಿದ್ದು, ತಾಪಮಾನ ತೀವ್ರವಾಗಿ ಕುಸಿಯುತ್ತಿದೆ. ಚಳಿಯಿಂದಾಗಿ ಜನರು ಮನೆಯಿಂದ ಆಚೆ ಬರಲು ಭಯ ಪಡುತ್ತಿದ್ದಾರೆ. ಈ ನಡುವೆ ವೈದ್ಯಕೀಯ ತಜ್ಞರು ಬೆಂಗಳೂರಿಗರು ಎಚ್ಚರದಿಂದ ಇರುವ ಅಗತ್ಯವಿದೆ. ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತೆ ಅಗತ್ಯ ಎಂದು ಸಲಹೆ ನೀಡಿದ್ದಾರೆ.

ಭಾರಿ ಮಳೆ, ಶೀತಗಾಳಿ ಹೆಚ್ಚುತ್ತಿರುವುದರಿಂದ ಮನೆಯಲ್ಲೇ ಬಂಧಿಯಾಗುತ್ತಿರುವ ಜನರು ಕಿಡಕಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಕೊಂಡು ಬೆಚ್ಚನೆ ಇರಲು ಇಷ್ಟಪಡುತ್ತಿದ್ದಾರೆ. ಆದರೆ ಮನೆಯಲ್ಲಿ ಕ್ರಾಸ್ ವೆಂಟಿಲೇಷನ್ ಮುಖ್ಯ. ಮನೆ ಎಲ್ಲಾ ಕಿಡಕಿಗಳನ್ನು ಮುಚ್ಚಿದರೆ ಗಾಳಿಗೆ ಅವಕಾಶವಿರುವುದಿಲ್ಲ. ಇದರಿಂದ ನೆಗಡಿ, ಕುಟುಂಬದಲ್ಲಿ ಯಾರಿಗಾದರೂ ನೆಗಡಿ, ಕೆಮ್ಮು, ಜ್ವರ ಇದ್ದರೆ ಒಬ್ಬರಿಂದ ಒಬ್ಬರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸೋಂಕುಗಳು ಹೆಚ್ಚಾಗುವ ಸಾಧ್ಯತೆಯೂ ಇದೆ. ಹಾಗಾಗಿ ಆರೋಗ್ಯದ ಮೇಲೆ ನಿಗಾ ವಹಿಸಿ ಎಂಬುದು ವೈದ್ಯರ ಸಲಹೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...