alex Certify BIG NEWS: ರಾಜೀನಾಮೆ ಹೇಗೆ ಕೊಡಿಸಬೇಕು ಗೊತ್ತಿದೆ; ಮಾರ್ಮಿಕ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜೀನಾಮೆ ಹೇಗೆ ಕೊಡಿಸಬೇಕು ಗೊತ್ತಿದೆ; ಮಾರ್ಮಿಕ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದು, ಸಚಿವರ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ, ರಾಷ್ಟ್ರದ್ರೋಹದ ಕೆಲಸ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಆದರೆ ತಿರಂಗಾ ಯಾತ್ರೆ ಮಾಡಿರುವ ನಾನು ರಾಷ್ಟ್ರಭಕ್ತ. ಹೀಗಾಗಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಸಚಿವ ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದಾರೆ. ಮೊದಲು ಅವರು ರಾಜೀನಾಮೆ ಕೊಡಬೇಕು. ಕೊಟ್ಟಿಲ್ಲವೆಂದರೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...