alex Certify BIG NEWS: ರಾಜ್ಯಕ್ಕೆ ಈ ಸ್ಥಿತಿ ಬರುತ್ತೆ ಎಂದು ಊಹಿಸಿರಲೂ ಇಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಕಳವಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಕ್ಕೆ ಈ ಸ್ಥಿತಿ ಬರುತ್ತೆ ಎಂದು ಊಹಿಸಿರಲೂ ಇಲ್ಲ; ಮಾಜಿ ಸಿಎಂ ಕುಮಾರಸ್ವಾಮಿ ಕಳವಳ

ಕೋಲಾರ: ಹಿಜಾಬ್ ವಿಚಾರವಾಗಿ ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲು ಹೊರಟಿದ್ದಾರೆ. ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿದ್ದಾರೆ. ರಾಜ್ಯವನ್ನು ಇವರು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂಬುದು ಗೊತ್ತಿಲ್ಲ, ನಮ್ಮ ರಾಜ್ಯಕ್ಕೆ ಇಂತಹ ಸ್ಥಿತಿ ಬರುತ್ತೆ ಎಂದು ಊಹಿಸಿರಲೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ಬಂದ ಬಳಿಕವೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಸಿದ್ದರಾಮಯ್ಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ರಾಜಕೀಯ ನಾಯಕರು ರಾಜ್ಯವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ? ರಾಜ್ಯದ ಇಂದಿನ ಪರಿಸ್ಥಿತಿಗೆ ಅವರೇ ಕಾರಣ ಎಂದರು.

SHOCKING NEWS: ನೇಣಿಗೆ ಕೊರಳೊಡ್ಡಿದ ಉಪತಹಶ್ಲೀಲ್ದಾರ್ ತಂದೆ-ತಾಯಿ

ಬಿಜೆಪಿ 104 ಸ್ಥಾನ ಪಡೆಯಲು ಸಿದ್ದರಾಮಯ್ಯ ಕಾರಣ. ಬಿಜೆಪಿಯ ಬಿ ಟೀಂ ಜೆಡಿಎಸ್ ಅಂತ ಹೇಳಿ ಬಿಜೆಪಿ ತಂದರು. ಸಿದ್ದರಾಮಯ್ಯನವರನ್ನು ನಂಬಿ ಮುಸಲ್ಮಾನರು ಬೀದಿಗೆ ಬಂದರು. ಹಾಗಾಗಿ ಮುಸಲ್ಮಾನ ನಾಯಕರು ಮರುಚಿಂತನೆ ಆರಂಭಿಸಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...