alex Certify BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಕೇಸರಿ ಪಾಳಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಕೇಸರಿ ಪಾಳಯ

ಬೆಂಗಳೂರು: ಒಂದೆಡೆ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಅರ್ಜಿ ವಜಾ ವಿಚಾರವಾಗಿ ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆಗೆ ಸಜ್ಜಾಗಿದ್ದರೆ ಇನ್ನೊಂದೆಡೆ ಬಿಜೆಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಸರ್ಕರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಜೈನಮುನಿ ಹತ್ಯೆ ಪ್ರಕರಣ, ಯುವ ಬ್ರಿಗೇಡ್ ಕಾರ್ಯಕ್ರ್ತನ ಹತ್ಯೆ ಪ್ರಕರಣ ಮುಂದಿಟ್ಟು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಭಟನೆ ನಡೆಸಲಿದ್ದಾರೆ.

ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...