ಕಾರವಾರ: ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸುತ್ತಿದೆ. ಮಳೆ ನಿರೀಕ್ಷೆಯಲ್ಲಿ ರೈತರು ಬಿತ್ತಿದ ಬೀಜಗಳು ಹೊಲದಲ್ಲಿ ಒಣಗಲಾರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಶುರುವಾಗಿದೆ. ಗ್ರಾಮಗಳ ರೈತರು ಕಪ್ಪೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ರೈತ ಮಹಿಳೆಯರು ಕಪ್ಪೆಗಳ ಮದುವೆ ಮಾಡಿ ಮಳೆರಾಯನ ಹಾಡು ಹಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.
ಕಪ್ಪೆಗಳನ್ನು ಅಲಂಕೃತ ಬುಟ್ಟಿಯಲ್ಲಿಟ್ಟು ಬುಟ್ಟಿಯನ್ನು ತಲೆ ಮೇಲೆ ಹೊತ್ತು ಹುಯ್ಯೋ ಹುಯ್ಯೋ ಮಳೆರಾಯ ಎಂದು ಹಾಡು ಹಾಡಿ ಪ್ರಾರ್ಥಿಸಿದ್ದಾರೆ.