alex Certify BIG NEWS: ರಾಜ್ಯಪಾಲರ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಪಾಲರ ಹೆಸರಲ್ಲಿ ವಂಚನೆ; ಖತರ್ನಾಕ್ ಆರೋಪಿ ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ಸಚಿವರ ಹೆಸರು ಹೇಳಿ ವಂಚಿಸಿದ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಾಜ್ಯಪಾಲರ ಹೆಸರಲ್ಲಿಯೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಿಮ್ಮನ್ನು ವಿವಿ ಸಿಂಡಿಕೇಟ್ ಸದಸ್ಯನನ್ನಾಗಿ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಬಳ್ಳಾರಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸದರುಲ್ಲಾ ಖಾನ್ ಬಂಧಿತ ಆರೋಪಿ. ತಾನು ರಾಜ್ಯಪಾಲರ ಅಧೀನ ಕಾರ್ಯದರ್ಶಿಯಾಗಿದ್ದು, ಎಲ್ಲಾ ವಿವಿಗಳಿಗೂ ಸೆನೆಟ್ ಸದಸ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಅಲ್ಲದೇ ಹಲವರಿಗೆ ನಿಮ್ಮನ್ನು ವಿವಿ ಸಿಂಡಿಕೇಟ್ ಸದಸ್ಯನನ್ನಾಗಿ ಮಾಡುತ್ತೇನೆ ಎಂದು ಗಣ್ಯ ವ್ಯಕ್ತಿಗಳಿಗೆ ಕರೆ ಮಾಡಿ ವಂಚಿಸುತ್ತಿದ್ದ. ರಾಜ್ಯಪಾಲರ ಕಚೇರಿಯಿಂದ ಕರೆ ಬಂದಿದೆ ಎಂದು ಹಲವರು ನಂಬಿ ಮೋಸ ಹೋಗಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇದೀಗ ಬಳ್ಳಾರಿ ಮೂಲದ ಸದರುಲ್ಲಾ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...