alex Certify BIG NEWS: ರಾಜ್ಯಸಭೆಯ 2 ಸ್ಥಾನಗಳಿಗೆ ಐವರ ಹೆಸರು ಶಿಫಾರಸು; ರಾಜ್ಯ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಸ್ತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭೆಯ 2 ಸ್ಥಾನಗಳಿಗೆ ಐವರ ಹೆಸರು ಶಿಫಾರಸು; ರಾಜ್ಯ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಖಾಲಿಯಿರುವ ಎರಡು ಸ್ಥಾನಗಳಿಗೆ ರಾಜ್ಯ ಬಿಜೆಪಿ ಐವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಿದೆ.

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಯಿತು. ವಿಧಾನ ಪರಿಷತ್ ಗೆ ಬಿ.ವೈ. ವಿಜಯೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನಾ ಹಾಗೂ ಛಲವಾದಿ ನಾರಾಯಣಸ್ವಾಮಿ ಹೆಸರು ಶಿಫಾರಸು ಮಾಡಲಾಗಿದೆ.

ಇದೇ ವೇಳೆ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್, ಲಹರಿ ವೇಲು ಹಾಗೂ ಪ್ರಕಾಶ್ ಶೆಟ್ಟಿ ಹೆಸರು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...