alex Certify BIG NEWS: ರಾಜ್ಯ ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವರಿಂದಲೇ ಅಸಮಾಧಾನ; ಸಚಿವ ಮಾಧುಸ್ವಾಮಿ ಆಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವರಿಂದಲೇ ಅಸಮಾಧಾನ; ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ಈ ಸರ್ಕಾರ ನಡೆಯುತ್ತಿಲ್ಲ, ಏಳೆಂಟು ತಿಂಗಳು ಇದೆ ಅಂತ ಮ್ಯಾನೇಜ್ ಮಾಡುತ್ತಿದ್ದೇವೆ ಅಷ್ಟೇ ಎಂದು ಸಚಿವ ಮಾಧುಸ್ವಾಮಿ ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ. ಸೊಸೈಟಿಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರರೊಬ್ಬರು ಕರೆ ಮಾಡಿದ್ದು, ಈ ವೇಳೆ ಸರ್ಕಾರದ ನಡೆ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ರೈತರ ಸಮಸ್ಯೆ ಬಗೆಹರಿಸಲಾಗುತ್ತಿಲ್ಲ, ಈ ಸರ್ಕಾರ ಏನೂ ಮಾಡುತ್ತಿಲ್ಲ, ಏಳೆಂಟು ತಿಂಗಳು ಇದೆ ಎಂದು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...