alex Certify BIG NEWS: ರೊಚ್ಚಿಗೆದ್ದ ಕಿಚ್ಚ ಸುದೀಪ್ ಅಭಿಮಾನಿಗಳು; ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೊಚ್ಚಿಗೆದ್ದ ಕಿಚ್ಚ ಸುದೀಪ್ ಅಭಿಮಾನಿಗಳು; ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ

ವಿಜಯಪುರ: ಕೋಟಿಗೊಬ್ಬ-3 ಚಿತ್ರ ಬಿಡುಗಡೆ ರದ್ದಾಗುತ್ತಿದ್ದಂತೆ ಕಿಚ್ಚ ಅಸುದೀಪ್ ಅಭಿಮಾನಿಗಳ ಸಹನೆ ಕಟ್ಟೆಯೊಡೆದಿದೆ. ರೊಚ್ಚಿಗೆದ್ದಿರುವ ಅಭಿಮಾನಿಗಳು ಚಿತ್ರಮಂದಿರಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರದ ಟಿಪ್ಪು ಚೌಕ್ ಬಳಿಯಿರುವ ಡ್ರೀಮ್ ಲ್ಯಾಂಡ್ ಚಿತ್ರಮಂದಿರದಲ್ಲಿ ಕಲ್ಲು ತೂರಾಟ ನಡೆಸಿರುವ ಸುದೀಪ್ ಅಭಿಮಾನಿಗಳು ದಾಂದಲೆ ನಡೆಸಿದ್ದಾರೆ. ಕಲ್ಲು ತೂರಾಟಕ್ಕೆ ಚಿತ್ರ ಮಂದಿರದ ಗಾಜುಗಳು ಪುಡಿಪುಡಿಯಾಗಿವೆ.

ಲಸಿಕೆ ಬೇಡವೆಂದು ನೆಲದ ಮೇಲೆ ಹೊರಳಾಡಿ ಗೋಳಿಟ್ಟ ವೃದ್ಧೆ..! ಮಹಿಳೆ ರಂಪಾಟ ಕಂಡು ಆರೋಗ್ಯ ಸಿಬ್ಬಂದಿ ಸುಸ್ತೋಸುಸ್ತು

ಇನ್ನು ಬೆಳಗಾವಿಯಲ್ಲಿಯೂ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಕಾಯುತ್ತಿದ್ದ ಅಭಿಮಾನಿಗಳು, ಚಿತ್ರ ಬಿಡುಗಡೆ ರದ್ದಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಥಿಯೇಟರ್ ಗೆ ನುಗ್ಗಲು ಯತ್ನಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ.

ಇಂದು ಕೋಟಿಗೊಬ್ಬ-3 ಚಿತ್ರದ ಬಿಡುಗಡೆಗಾಗಿ ರಾಜ್ಯಾದ್ಯಂತ ಥಿಯೇಟರ್ ಬಳಿ ಕಾದು ಕುಳಿತಿದ್ದ ಕಿಚ್ಚನ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ತಾಂತ್ರಿಕ ಸಮಸ್ಯೆ ಕಾರಣದಿಂದಾಗಿ ಚಿತ್ರ ಬಿಡುಗಡೆ ರದ್ದಾಗಿದೆ. ನಾಳೆ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ತಿಳಿಸಿದ್ದಾರೆ. ಸಿನಿಮಾ ರದ್ದಾಗುತ್ತಿದ್ದಂತೆ ರಾಜ್ಯಾದ್ಯಂತ ಕಿಚ್ಚನ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...