alex Certify BIG NEWS: ರೋಚಕ ಘಟ್ಟ ತಲುಪಿದ ರಾಜ್ಯಸಭಾ ರಣಾಂಗಣ; ಕಣದಲ್ಲಿಯೇ ಉಳಿದ ನಾಮಪತ್ರ ಸಲ್ಲಿಸಿದ 6 ಅಭ್ಯರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೋಚಕ ಘಟ್ಟ ತಲುಪಿದ ರಾಜ್ಯಸಭಾ ರಣಾಂಗಣ; ಕಣದಲ್ಲಿಯೇ ಉಳಿದ ನಾಮಪತ್ರ ಸಲ್ಲಿಸಿದ 6 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರೋಚಕ ಘಟ್ಟ ತಲುಪಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ 6 ಅಭ್ಯರ್ಥಿಗಳು ಕಣದಲ್ಲಿಯೇ ಉಳಿದುಕೊಂಡಿದ್ದಾರೆ.

ಇಂದು ಮಧ್ಯಾಹ್ನ ಮೂರು ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿತ್ತು. ನಾಮಪತ್ರ ಹಿಂಪಡೆದುಕೊಳ್ಳುವ ಸಮಯಾವಕಾಶ ಮುಕ್ತಾಯವಾಗಿದ್ದು, 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜೂನ್ 10ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, 5 ಗಂಟೆ ಬಳಿಕ ರಾಜ್ಯಸಭಾ ಚುನಾವಣೆ ಮತ ಎಣಿಕೆ ನಡೆಯಲಿದೆ.

ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ರಾಜ್ಯಸಭೆಗೆ ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ನಿಂದ ಜೈರಾಮ್ ರಮೇಶ್, ಮನ್ಸೂರ್ ಅಲಿಖಾನ್ ಸ್ಪರ್ಧಿಸಿದ್ದಾರೆ.

ಇನ್ನು ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಆರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...