alex Certify BIG NEWS: ವರಿಷ್ಠರು ಬುದ್ಧಿವಂತರಿದ್ದಾರೆ, ಯಾರು ಏನ್ ಮಾಡ್ತಾರೆ ಅಂತ ಗೊತ್ತಿದೆ; ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರಿಷ್ಠರು ಬುದ್ಧಿವಂತರಿದ್ದಾರೆ, ಯಾರು ಏನ್ ಮಾಡ್ತಾರೆ ಅಂತ ಗೊತ್ತಿದೆ; ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಿರುವ ನಡುವೆಯೇ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಶಾಸಕರು ಯಾವುದೇ ಸಭೆ ನಡೆದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಇವತ್ತಿನದ್ದು ಸಭೆ ಅಲ್ಲ, ಊಟಕ್ಕೆ ಸೇರಿದ್ವಿ. ಆಗಾಗ ಊಟಕ್ಕೆ ಸೇರುತ್ತೇವೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಗೌಪ್ಯ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಜಾರಕಿಹೊಳಿ, ನಮ್ಮ ವರಿಷ್ಠರು ಬಹಳ ಬುದ್ಧಿವಂತರಿದ್ದಾರೆ. ಯಾರ್ ಏನು ಮಾಡ್ತಾರೆ ಅಂತ ಗೊತ್ತಿದೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ತಮ್ಮನ್ನು ಬದಿಗಿಟ್ಟು ಸಭೆ ನಡೆಸಿದ್ದಾರೆ ಎಂಬ ವಿಚಾರವಾಗಿ, ಒಂದು ವೇಳೆ ಅವರು ಪಕ್ಷ ಸಂಘಟನೆ ನಿಟ್ಟಿನಲ್ಲಿ ಸಭೆ ಸೇರಿದ್ದರೆ ನಾನು ಮಾಧ್ಯಮಗಳ ಮುಂದೆ ಮಾತಾಡುವುದು ತಪ್ಪಾಗುತ್ತದೆ. ವರಿಷ್ಠರಿಗೆ ಎಲ್ಲವೂ ಗೊತ್ತಿದೆ ಹಾಗಾಗಿ ಈ ಬಗ್ಗೆ ನಾನು ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...