alex Certify BIG NEWS: ವರುಣನ ಆರ್ಭಟಕ್ಕೆ ಆಗುಂಬೆಯಲ್ಲಿ ಭೂ ಕುಸಿತ; ಶಿವಮೊಗ್ಗದಲ್ಲಿ ಗುಡ್ಡ ಕುಸಿತಕ್ಕೆ 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣನ ಆರ್ಭಟಕ್ಕೆ ಆಗುಂಬೆಯಲ್ಲಿ ಭೂ ಕುಸಿತ; ಶಿವಮೊಗ್ಗದಲ್ಲಿ ಗುಡ್ಡ ಕುಸಿತಕ್ಕೆ 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಆಗುಂಬೆ ಗಟ್ಟದಲ್ಲಿ ಭೂಕುಸಿತವುಂಟಾಗಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಭೂಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಶಿವಮೊಗ್ಗ-ಉಡುಪಿ, ಆಗುಂಬೆ ಘಾಟಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು, ಮರಗಳು ಬಿದ್ದಿದ್ದು, ಒಂದೆಡೆ ಧಾರಾಕಾರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.

ಇದೇ ವೇಳೆ ಸಾಗರ ತಾಲೂಕಿನ ಅಡಗಳಲೆ ಗ್ರಾಮದಲ್ಲಿ ಗುಡ್ಡ ಕುಸಿದಿದ್ದು, 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, 1500 ವರ್ಷಗಳ ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ದೇವಾಲಯ ಸೋರುತ್ತಿದೆ. ದೇಗುಲದ ಗರ್ಭಗುಡಿ, ಸಂಕಲ್ಪ ಮಂಟಪ, ತ್ರಿಕೊಲ ಮಂಟಪದಲ್ಲಿ ಮಳೆ ನೀರು ಸುರಿಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...