alex Certify BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ತಮ್ಮ ಪುತ್ರ ಯತೀಂದ್ರ ಜೊತೆಗೂಡಿ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿರುವ ಸಿದ್ದರಾಮಯ್ಯ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಈ ವೇಳೆ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಕೆರೆಗೆ ತೆರಳಿ ಪುತ್ರ ಯತೀಂದ್ರ ಜೊತೆ ಬಾಗಿನ ಅರ್ಪಿಸಿದರು. ಸಿದ್ದರಾಮಯ್ಯ ಅವರಿಗೆ ಶಾಸಕ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆಗಳನ್ನು ಕೂಗಿದ ಪ್ರಸಂಗವೂ ನಡೆಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...