alex Certify BIG NEWS: ವಿದ್ಯುತ್ ಅವಘಡ; ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ಅವಘಡ; ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿ ದುರ್ಮರಣ

ರಾಯಚೂರು: ವಿದ್ಯುತ್ ತಂತಿ ತಗುಲಿ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

8ನೇ ತರಗತಿಯ ವಿದ್ಯಾರ್ಥಿ ಮಲ್ಲಿಕಾರ್ಜುನ ಮೃತ ಬಾಲಕ. ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋದ ಬಾಲಕ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...