alex Certify BIG NEWS: ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ; ಹೆಡ್ ಮಾಸ್ಟರ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ; ಹೆಡ್ ಮಾಸ್ಟರ್ ಸಸ್ಪೆಂಡ್

ಬೆಳಗಾವಿ: ಶಾಲೆಗೆ ಬಂದ ವಿದ್ಯಾರ್ಥಿನಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡೋಣೆವಾಡಿಯಲ್ಲಿ ನಡೆದಿದೆ.

ಅನುಷ್ಕಾ ಸದಾಶಿವ ಬೆಂಡೆ (9) ಮೃತ ವಿದ್ಯಾರ್ಥಿನಿ. ಶಾಲೆಯ ಶೌಚಾಲಯದಲ್ಲಿರುವ ಕಂಬದ ಸಹಾಯದಿಂದ ಶಾಲೆಯ ಅಕ್ಕಪಕ್ಕದ ಮನೆಯವರು ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಕಂಬದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕ ಕುಮಾರ್ ನಾಟೇಕರ್ ಅವರನ್ನು ಕೆಲಸದಿಂದ ವಜಾ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...