alex Certify BIG NEWS: ವಿದ್ಯುತ್ ತಂತಿ ಮೇಲೆ ಬಿದ್ದ ವಸ್ತು ತೆಗೆಯಲು ಹೋದ ವ್ಯಕ್ತಿ; ಕರೆಂಟ್ ಶಾಕ್ ಹೊಡೆದು ಸಾವು; ಘೋರ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿ ಮೇಲೆ ಬಿದ್ದ ವಸ್ತು ತೆಗೆಯಲು ಹೋದ ವ್ಯಕ್ತಿ; ಕರೆಂಟ್ ಶಾಕ್ ಹೊಡೆದು ಸಾವು; ಘೋರ ದೃಶ್ಯ ಸಿಸಿಟಿವಿ ಕ್ಯಾಮರದಲ್ಲಿ ಸೆರೆ

ಹಾಸನ: ಮನೆಯ ಮುಂದೆ ಇದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಮಾಪ್ ಮೂಲಕ ತೆಗೆಯಲು ಹೋದ ವ್ಯಕ್ತಿ ನೋಡ ನೋಡುತ್ತಿದ್ದಂತೆಯೇ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಉದಯಗಿರಿ ಲೇಔಟ್ ನಲ್ಲಿ ನಡೆದಿದೆ.

ಮಲ್ಲಪ್ಪ ಮೃತ ದುರ್ದೈವಿ. ಮನೆಯ ಮುಂದೆ ಹಾದು ಹೋಗಿರುವ ವಿದ್ಯುತ್ ತಂತಿ ಮೇಲೆ ಬಿದ್ದಿರುವ ವಸ್ತುವನ್ನು ನೆಲ ಒರೆಸುವ ಮಾಪ್ ಬಳಸಿ ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಘೋರ ದೃಶ್ಯದ ವಿಡಿಯೋ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಾಸನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...