alex Certify BIG NEWS: ವಿಧಾನಸಭೆಯಲ್ಲಿಯೇ BJP-TMC ಶಾಸಕರ ಮಾರಾಮಾರಿ; ಐವರು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆಯಲ್ಲಿಯೇ BJP-TMC ಶಾಸಕರ ಮಾರಾಮಾರಿ; ಐವರು ಸಸ್ಪೆಂಡ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ರಣರಂಗವಾಗಿ ಮಾರ್ಪಟ್ಟ ಘಟನೆ ನಡೆದಿದೆ. ವಿಧಾನಸಭಾ ಕಲಾಪ ನಡೆಯುತ್ತಿರುವಾಗಲೇ ಬಿಜೆಪಿ ಹಾಗೂ ಟಿಎಂಸಿ ಶಾಸಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ.

ಬಿರ್ಭೂಮ್ ನ ರಾಮಪುರಹತ್ ಹತ್ಯಾಕಾಂಡದ ಬಗ್ಗೆ ಚರ್ಚೆಗೆ ಸುವೇಂದು ಅಧಿಕಾರಿ ಪಟ್ಟು ಹಿಡಿದಿದ್ದರು. ಈ ವೇಳೆ ಬಿಜೆಪಿ ಮುಖ್ಯ ಸಚೇತಕ ಮನೋಜ್ ತಿಗ್ಗಾ ಮೇಲೆ ಹಲ್ಲೆ ನಡೆಸಲಾಗಿದೆ. ಕಲಾಪದಲ್ಲಿಯೇ ಆಡಳಿತ ಪಕ್ಷ ಟಿಎಂಸಿ ಹಾಗೂ ಬಿಜೆಪಿಯ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಟಿಎಂಸಿ ಶಾಸಕ ಅಸೀತ್ ಮಜುಂದಾರ್ ಗೂ ಗಲಾಟೆ ವೇಳೆ ಗಾಯಗಳಾಗಿವೆ.

ತಮ್ಮ ಪಕ್ಷದ ಶಾಸಕರನ್ನು ಟಿಎಂಸಿ ಶಾಸಕರು ನೆಲದ ಮೇಲೆ ತಳ್ಳಿ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದಾರೆ. ಸದನದಲ್ಲಿ ಗಲಾಟೆ ನಡೆಸಿದ ಹಿನ್ನೆಲೆಯಲ್ಲಿ ಒಟ್ಟು ಐವರು ಶಾಸಕರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೊಡೆದಾಟ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...