alex Certify BIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್. ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್. ಈಶ್ವರಪ್ಪ

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಚುನಾವಣೆ ಕೆಟ್ಟ ಕನಸು ಎಂದು ಭಾವಿಸಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಅಣಿಯಾಗುತ್ತಿದ್ದೇವೆ ಎಂದು ಹೇಳಿದರು.

7 ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿಯೂ ಪಕ್ಷದ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಹಿಂದಿನ ತಪ್ಪನ್ನು ನಾವೇ ಸರಿಪಡಿಸಬೇಕು. ಅದೊಂದು ಕೆಟ್ಟ ಕನಸು ಪದೇ ಪದೇ ಯಾಕೆ ನೆನಪಿಸಿಕೊಳ್ಳಬೇಕು? ಲೋಕಸಭೆ ಟಿಕೆಟ್ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...