alex Certify BIG NEWS: ವಿಧಾನ ಪರಿಷತ್; ರಾಜ್ಯಸಭಾ ಚುನಾವಣೆ; ಶೀಘ್ರದಲ್ಲಿಯೇ ಟಿಕೆಟ್ ಹಂಚಿಕೆ ಎಂದ ಸಿಎಂ; ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್; ರಾಜ್ಯಸಭಾ ಚುನಾವಣೆ; ಶೀಘ್ರದಲ್ಲಿಯೇ ಟಿಕೆಟ್ ಹಂಚಿಕೆ ಎಂದ ಸಿಎಂ; ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು….?

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ದೆಹಲಿಗೆ ಬಂದಿದ್ದೆ. ಆದರೆ ಅವರ ಭೇಟಿಗೆ ಸಮಯಾವಕಾಶ ಸಿಕ್ಕಿಲ್ಲ. ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರಿಗೆ ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಫೋನ್ ನಲ್ಲಿ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದ್ದೇನೆ. ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಿದ್ದೇವೆ. ರಾಜ್ಯ ಉಸ್ತುವಾರಿ ಜತೆ ಮಾತನಾಡಲು ಹೇಳಿದ್ದರು ಎಂದರು.

ಈ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಈ ಬಾರಿಯೂ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಅನುಮತಿ ನೀಡಿಲ್ಲ ಎಂಬುದು ಖಚಿತವಾದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...