alex Certify BIG NEWS: ಶಾಸಕರು ದೂರು ಕೊಟ್ಟಿಲ್ಲ, ಆದರೆ ಸಭೆ ಕರೆಯಿರಿ ಎಂದಿದ್ದಾರೆ; ಸಿಎಂ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರು ದೂರು ಕೊಟ್ಟಿಲ್ಲ, ಆದರೆ ಸಭೆ ಕರೆಯಿರಿ ಎಂದಿದ್ದಾರೆ; ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: ಸಚಿವರುಗಳ ವಿರುದ್ಧ ಅಸಮಾಧಾನಗೊಂಡಿರುವ ಹಲವು ಶಾಸಕರು ಪತ್ರ ಬರೆದು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಶಾಸಕರು ಪತ್ರ ಬರೆದು ಯಾವುದೇ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರು ದೂರು ನೀಡಿಲ್ಲ, ಶಾಸಕಾಂಗ ಸಭೆ ಕರೆಯುವಂತೆ ಹೇಳಿದ್ದಾರೆ. ಹೀಗಾಗಿ ಜುಲೈ 27ರಂದು ಸಭೆ ಕರೆಯಲಾಗಿದೆ ಎಂದರು.

ಕಳೆದ ವಾರ ಸಭೆ ನಡೆಸಬೇಕಿತ್ತು. ಆದರೆ ರಾಹುಲ್ ಗಾಂಧಿ ಬರುತ್ತಿದ್ದ ಕಾರಣ ಶಾಸಕಾಂಗ ಸಭೆ ಕರೆದಿರಲಿಲ್ಲ. ಈಗ ಗುರುವಾರ ಸಭೆ ಕರೆಯಲಾಗಿದೆ ಎಂದರು. ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳೂ ಆಗಿಲ್ಲ. ಹೀಗಿರುವಾಗ ಅಸಮಾಧಾನ ಹೇಗೆ ಸಾಧ್ಯ. ಯಾವ ಅಸಮಾಧಾನವೂ ಇಲ್ಲ, ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...