alex Certify BIG NEWS: ಶಾಸಕಾಂಗ ಪಕ್ಷದ ಸಭೆಯಲ್ಲಿ ಕಿಡಿ ಕಾರಿದ ಬಿಜೆಪಿ ಶಾಸಕ; ಸಚಿವ ಸ್ಥಾನ ನೀಡದೆ ವಂಚಿಸಿದ್ದಕ್ಕೆ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕಾಂಗ ಪಕ್ಷದ ಸಭೆಯಲ್ಲಿ ಕಿಡಿ ಕಾರಿದ ಬಿಜೆಪಿ ಶಾಸಕ; ಸಚಿವ ಸ್ಥಾನ ನೀಡದೆ ವಂಚಿಸಿದ್ದಕ್ಕೆ ಆಕ್ರೋಶ

ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್, ಸಚಿವ ಸ್ಥಾನ ನೀಡುವುದಾಗಿ ತಮ್ಮನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಈಗ ವಂಚಿಸಿರುವ ಕುರಿತಂತೆ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ ಎಂದು ಹೇಳಲಾಗಿದೆ.

ನನ್ನ ಕ್ಷೇತ್ರವನ್ನು ಸಹ ಬೇರೆಯವರಿಗೆ ಬಿಟ್ಟು ನಾನು ಈಗ ಅತಂತ್ರನಾಗಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸಚಿವ ಸ್ಥಾನ ನೀಡುವುದಾಗಿ ಹೇಳಿ ಮಾತಿಗೆ ತಪ್ಪಿದ್ದೀರಿ. ನನಗೆ ಮೋಸ ಮಾಡಿದ್ದೀರಿ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ತಿಂಗಳುಗಳ ಮಾತ್ರ ಬಾಕಿ ಇದ್ದು, ಕ್ಷೇತ್ರ ಬಿಟ್ಟು ಕೊಟ್ಟಿರುವುದರಿಂದ ನನ್ನ ರಾಜಕೀಯ ಭವಿಷ್ಯವೇ ಹಾಳಾಗುವಂತಾಗಿದೆ ಎಂದು ಶಂಕರ್ ಹೇಳಿದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರನ್ನು ಸಮಾಧಾನಪಡಿಸಿ ಅದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...