alex Certify BIG NEWS: ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಸ್ವಾಭಿಮಾನಿ ಹಿಂದೂ ಅಭಿಯಾನ; ಕಾಂಗ್ರೆಸ್ ದೊಡ್ದ ಬೆಲೆ ತೆರಬೇಕಾಗುತ್ತೆ; ಸಚಿವ ಸುನೀಲ್ ಕುಮಾರ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಸ್ವಾಭಿಮಾನಿ ಹಿಂದೂ ಅಭಿಯಾನ; ಕಾಂಗ್ರೆಸ್ ದೊಡ್ದ ಬೆಲೆ ತೆರಬೇಕಾಗುತ್ತೆ; ಸಚಿವ ಸುನೀಲ್ ಕುಮಾರ್ ಎಚ್ಚರಿಕೆ

ಉಡುಪಿ: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹಿಂದೂಗಳ ಸ್ವಾಭಿಮಾನಕ್ಕೆ ಧಕ್ಕೆಯುಂಟುಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ಹಿಂದೂ ಪದ ಅಶ್ಲೀಲ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಸತೀಶ್ ಜಾರಕಿಹೊಳಿ ಹಿಂದುತ್ವ, ಭಾರತೀಯತೆ, ಭಾರತೀಯ ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಭಾರತೀಯತೆಗೆ, ಹಿಂದೂತ್ವಕ್ಕೆ ಅವಮಾನ ಮಾಡುತ್ತಲೇ ಇದೆ. ಅಂದು ನೆಹರೂ ಅವರು ತನ್ನನ್ನು ಹಿಂದೂ ಎಂದು ಕರೆಯಬೇಡಿ ಬೇರೆ ಏನನ್ನಾದರೂ ಕರೆಯಿರಿ ಎಂದು ಹೇಳಿದ್ದರು. ಆ ಮೂಲಕ ಹಿಂದೂಗಳು, ಭಾರತೀಯತೆಯನ್ನೇ ಅಪಮಾನಿಸಿದ್ದರು. ದೇಶ ಒಡೆಯುವ ಕೆಲಸ ಮಾಡಿದರು. ಈಗ ಕಾಂಗ್ರೆಸ್ ನ ನಾಯಕರು ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಹಿಂದೂ ಪದ ಅಶ್ಲೀಲ ಎಂದು ಹೇಳಿರುವುದು ಹಿಂದುಗಳಿಗೆ ಹಿಂದುತ್ವಕ್ಕೆ ಅಪಮಾನ ಮಾಡಿದಂತೆ. ಹಿಂದೂ ಎಂಬುದು ನಮ್ಮ ಪದ್ಧತಿ. ಸಂಸ್ಕಾರ. ಇಡೀ ಭಾರತೀಯತೆಯನ್ನು ಬಿಂಬಿಸುವಂತದ್ದು. ಆದರೆ ಸತೀಶ್ ಜಾರಕಿಹೊಳಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಹಿಂದುತ್ವ ಭಾರತೀಯತೆಯನ್ನು ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ಎಲ್ಲರೂ ಇದನ್ನು ಖಂಡಿಸಲೇಬೇಕು. ಜಾರಕಿಹೊಳಿ ಹೇಳಿಕೆ ವಿರುದ್ಧ ಸ್ವಾಭಿಮಾನಿ ಹಿಂದೂ ಅಭಿಯಾನ ಆರಂಭಿಸಲಾಗುವುದು. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...