alex Certify BIG NEWS: ಶಿಕಾರಿಪುರದಿಂದಲೇ ನಾನು ಸ್ಪರ್ಧಿಸಬೇಕೆಂದಿಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿಂದಲೇ ತೀರ್ಮಾನ ಎಂದ ಬಿ.ವೈ.‌ ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕಾರಿಪುರದಿಂದಲೇ ನಾನು ಸ್ಪರ್ಧಿಸಬೇಕೆಂದಿಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿಂದಲೇ ತೀರ್ಮಾನ ಎಂದ ಬಿ.ವೈ.‌ ವಿಜಯೇಂದ್ರ

ಕೊಪ್ಪಳ: ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷ ಸೂಕ್ತ ಸಮಯದಲ್ಲಿ, ಸೂಕ್ತರಾದ ವ್ಯಕ್ತಿಯನ್ನು ಆಯ್ಕೆ ಮಾಡುತ್ತೆ ಎಂದು ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ವಿಜಯೇಂದ್ರ, ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಗೊಂದಲವಿಲ್ಲ. ಯಡಿಯೂರಪ್ಪನವರಿಗೆ ಶಿಕಾರಿಪುರದೊಂದಿಗೆ ಅವಿನಾಭಾವ ಸಂಬಂಧವಿದೆ. ಹಾಗಾಗಿ ಅವರು ಘೋಷಣೆ ಮಾಡಿದ್ದಾರೆ. ಶಿಕಾರಿಪುರದಿಂದಲೇ ನಾನು ಸ್ಪರ್ಧಿಸಬೇಕೆಂದೇನೂ ಇಲ್ಲ. ಇಡೀ ಕರ್ನಾಟಕವೇ ನನ್ನ ಕ್ಷೇತ್ರ ಎಂದರು.

ನಮ್ಮದು ಭಾರತೀಯ ಜನತಾಪಾರ್ಟಿ, ಇಲ್ಲಿ ಉತ್ತರಾಧಿಕಾರಿ ಪ್ರಶ್ನೆ ಬರಲ್ಲ. ಯಡಿಯೂರಪ್ಪನವರು 30-40 ವರ್ಷಗಳ ಕಾಲ ಜೀವನ ಧಾರೆ ಎರೆದಿದ್ದಾರೆ. ಬಿಜೆಪಿ ಅವರಿಗೆ ಗೌರವ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ಯಡಿಯೂರಪ್ಪ ಅವರ ಶಕ್ತಿ ಉಪಯೋಗಿಸಿಕೊಂಡು ರಾಜ್ಯದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಶಿಕಾರಿಪುರ ಮಾತ್ರವಲ್ಲ 224 ಕ್ಷೇತ್ರದ ಬಗ್ಗೆ ತೀರ್ಮಾನ ಮಾಡುತ್ತಾರೆ. ನನಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಮೇಲೂ ಒಲವಿದೆ. ಸೂಕ್ತ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...