alex Certify BIG NEWS: ಶಿವಮೂರ್ತಿ ಶರಣರನ್ನು ಮುರುಘಾ ಮಠಕ್ಕೆ ಕರೆದೊಯ್ದು ಮಹಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೂರ್ತಿ ಶರಣರನ್ನು ಮುರುಘಾ ಮಠಕ್ಕೆ ಕರೆದೊಯ್ದು ಮಹಜರು

ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಮತ್ತೊಂದು ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಠದ ಅಡುಗೆ ಸಹಾಯಕಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣದ ವಿಚಾರಣೆಯನ್ನು ಪೊಲೀಸರು ಈಗ ನಡೆಸುತ್ತಿದ್ದಾರೆ.

ಹೀಗಾಗಿ ಇಂದು ಶಿವಮೂರ್ತಿ ಶರಣರನ್ನು ಮುರುಘಾ ಮಠಕ್ಕೆ ಕರೆದೊಯ್ದ ಪೊಲೀಸರು ಮಹಜರು ನಡೆಸಿದ್ದಾರೆ. ಈ ವೇಳೆ ಶ್ರೀಗಳ ಬೆಡ್ರೂಮ್, ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಮಹಜರು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖಾಧಿಕಾರಿ ಬಾಲಚಂದ್ರ ನಾಯ್ಕ್ ನೇತೃತ್ವದ ಪೊಲೀಸ್ ತಂಡ ಶಿವಮೂರ್ತಿ ಶರಣರನ್ನು ಮುರುಘಾ ಮಠಕ್ಕೆ ಕರೆದೊಯ್ದಿದ್ದು, ಈ ವೇಳೆ ಮಹಜರು ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...