BIG NEWS: ಶಿವಮೊಗ್ಗ ಏರ್ ಪೋರ್ಟ್ ನಿರ್ಮಾಣಕ್ಕೆ ಯಡಿಯೂರಪ್ಪ ಪರಿಶ್ರಮ ಕಾರಣ ಎಂದ ಸಿಎಂ ಬೊಮ್ಮಾಯಿ

ಶಿವಮೊಗ್ಗ: ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಒಂದು ಮೈಲುಗಲ್ಲು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಪರಿಶ್ರಮದಿಂದ ಏರ್ ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿಯಾಗುತ್ತಿದೆ. ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲಾಗಿದೆ. ಯಡಿಯೂರಪ್ಪನವರ ಪರಿಶ್ರಮಕ್ಕೆ ಸಂದ ಫಲ ಇದು ಎಂದು ತಿಳಿಸಿದ್ದಾರೆ.

ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮಕ್ಕೆ ಇದು ಸಹಾಯವಾಗಲಿದೆ. ಯಡಿಯೂರಪ್ಪನವರ ಹುಟ್ಟುಹಬ್ಬದಂದೇ ಏರ್ ಪೋರ್ಟ್ ನಿರ್ಮಾಣವಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಛೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read