alex Certify BIG NEWS: ಶಿವಮೊಗ್ಗ ಯುವಕನಿಗೆ ಚಾಕು ಇರಿದ ಪ್ರಕರಣ; ಆರೋಪಿಗೆ ಉಗ್ರರ ಜತೆ ನಂಟು; ಆಘಾತಕಾರಿ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗ ಯುವಕನಿಗೆ ಚಾಕು ಇರಿದ ಪ್ರಕರಣ; ಆರೋಪಿಗೆ ಉಗ್ರರ ಜತೆ ನಂಟು; ಆಘಾತಕಾರಿ ಮಾಹಿತಿ ಬಹಿರಂಗ

ಶಿವಮೊಗ್ಗ: ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಉಗ್ರರ ಜತೆ ನಂಟಿರುವ ಬಗ್ಗೆ ಗೊತ್ತಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವರು, ಯುವಕ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಪ್ರಮುಖ ಆರೋಪಿ ಜಬೀ ಎಂಬಾತನಿಗೆ ಭಯೋತ್ಪಾದಕರ ಜತೆ ಸಂಪರ್ಕವಿದೆ ಎಂಬ ಅಂಶ ಬಹಿರಂಗವಾಗಿದೆ. ಸಧ್ಯದಲ್ಲೇ ಪ್ರಕರಣವನ್ನು ಎನ್ಐಎ ಗೆ ಹಸ್ತಾಂತರಿಸಲಾಗುವುದು ಎಂದರು.

ಇನ್ನು ಶಿವಮೊಗ್ಗದಲ್ಲಿ ಶಾಂತಿ ನಡಿಗೆ ಜಾಥಾ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಶಿವಮೊಗ್ಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಆಗಾಗ ಇಂತಹ ಆಕಸ್ಮಿಕ ಘಟನೆಗಳು ನಡೆಯುತ್ತಿರುತ್ತವೆ. ಉಗ್ರರ ಜತೆ ಲಿಂಕ್ ಇದ್ದವರೊಂದಿಗೆ ಶಾಂತಿ ನಡಿಗೆ ನಡೆಸಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...