alex Certify BIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ 25-26 ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ಮೋದಿಯವರಿಗೆ ಕೊಡುಗೆ ಕೊಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಷಡ್ಯಂತ್ರದ ಮೂಲಕ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ. 25-26 ಲೋಕಸಭಾ ಸ್ಥಾನ ಗೆದ್ದು ಕೊಡುಗೆ ಕೊಡಬೇಕು ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹತ್ತಲ್ಲ, 15 ಕೆಜಿ ಅಕ್ಕಿ ಕೊಡಬೇಕು. ನಿರುದ್ಯೋಗಿ ಪದವೀಧರರಿಗೆ 3000 ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಅವಕಾಶ ಕೊಡದಂತೆ ನಾವು ಕೆಲಸ ಮಾಡಬೇಕು. ಅಧಿವೇಶನದ ಆರಂಭದ ದಿನದಿಂದಲೇ ನಾನು ಸತ್ಯಾಗ್ರಹ ಮಾಡುತ್ತೇನೆ. ವಿಧಾನಸಭೆಯಲ್ಲಿ ನಮ್ಮ ಪಕ್ಷದ ಶಾಸಕರು ಹೋರಾಟ ಮಾಡಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...