alex Certify BIG NEWS: ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಭೇಟಿ; ಸುಲಭವಾಗಿ ಸಂಪುಟ ರಚನೆ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಭೇಟಿ; ಸುಲಭವಾಗಿ ಸಂಪುಟ ರಚನೆ ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿರುವ ಬಸವರಾಜ್ ಬೊಮ್ಮಾಯಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಇಂದು ಮಧ್ಯಾಹ್ನ 12 ಗಂಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದೇನೆ. ಬಳಿಕ ಅಮಿತ್ ಶಾ ಅವರನ್ನು ಹಾಗೂ ಸಂಜೆ 4 ಗಂಟೆಗೆ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ಮೋದಿ ಭೇಟಿಯಾಗುತ್ತೇನೆ. ನಂತರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ. ಸಿಎಂ ಆದ ಬಳಿಕ ನಮ್ಮ ನಾಯಕರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸುವ ನಿಟ್ಟಿನಲ್ಲಿ ಈ ಭೇಟಿ ನಿಗದಿಯಾಗಿದೆ ಎಂದು ಹೇಳಿದರು.

ಇನ್ನು ಸಚಿವ ಸಂಪುಟ ರಚನೆ ಸುಲಭವಾಗಿ ಆಗಲಿದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಹಲವರು ಆಕಾಂಕ್ಷಿಗಳಿರುತ್ತಾರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ರಚನೆ ಮಾಡಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...