alex Certify BIG NEWS: ಸಂಜೆ 6ಕ್ಕೆ ಕೇಂದ್ರ ಸಂಪುಟ ಪುನಾರಚನೆ; ಸಚಿವ ಸ್ಥಾನದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಜೆ 6ಕ್ಕೆ ಕೇಂದ್ರ ಸಂಪುಟ ಪುನಾರಚನೆ; ಸಚಿವ ಸ್ಥಾನದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು ?

ಬೆಂಗಳೂರು: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ರಾಜ್ಯದ ನಾಯಕರಲ್ಲಿ ನಿರೀಕ್ಷೆ ಹೆಚ್ಚಿದೆ. ರಾಜ್ಯಕ್ಕೆ 2-3 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ಬಿ.ವೈ. ರಾಘವೇಂದ್ರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ ಸಂಸದ ಬಿ.ವೈ.ಆರ್.

ಶಿವಮೊಗ್ಗದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಉತ್ತಮ ಪರಿಣಾಮಕಾರಿ ಆಡಳಿತಕ್ಕಾಗಿ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. ಯಾರಿಗೆ ಮಂತ್ರಿ ಸ್ಥಾನ ನೀಡಬೇಕು ಎಂಬುದು ವರಿಷ್ಠರಿಗೆ ಬಿಟ್ಟ ನಿರ್ಧಾರ. ಕೇಂದ್ರ ಹಾಗೂ ರಾಜ್ಯ ನಾಯಕರೇ ನಿರ್ಧಾರ ಮಾಡುತ್ತಾರೆ ಎಂದರು.

BIG NEWS: ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಇನ್ನು ನಾಯಕತ್ವ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಈಗಾಗಲೇ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಕೆಲವರು ಹೇಳಿಕೆ ನೀಡುತ್ತಿರುವುದನ್ನು ವರಿಷ್ಠರು ಗಮನಿಸಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...