alex Certify BIG NEWS: ಸಂಪುಟ ವಿಸ್ತರಣೆ ಮತ್ತೆ ವಿಳಂಬ; ಸಿಎಂ ಬೊಮ್ಮಾಯಿ ಹೇಳಿದ್ದೇನು ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ ಮತ್ತೆ ವಿಳಂಬ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ಅಥವಾ ಇಂದು ಸಿಎಂ ದೆಹಲಿಗೆ ತೆರಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿಯೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಅವರ ದೆಹಲಿ ಪ್ರವಾಸ ಮತ್ತೆ ಮುಂದೂಡಿಕೆಯಾಗಿದೆ ಎನ್ನಲಾಗಿದೆ.

ಹೈಕಮಾಂಡ್ ಹೇಳಿದಾಗ ದೆಹಲಿಗೆ ಹೋಗುತ್ತೇನೆ ಎಂದು ಹೇಳುವ ಮೂಲಕ ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸುಳಿವು ನೀಡಿದ್ದಾರೆ ಸಿಎಂ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹೈಕಮಾಂಡ್ ತಿಳಿಸಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ವರಿಷ್ಠರು ಗುಜರಾತ್ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ಹಾಗಾಗಿ ಅವರು ಕರೆ ನೀಡಿದ ತಕ್ಷಣ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಕ್ಷೇತ್ರದ ಕೆಲಸದ ಅಭಿವೃದ್ಧಿ ವಿಚಾರವಾಗಿ ಭೇಟಿಯಾಗಿದ್ದರು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...