alex Certify BIG NEWS: ಸಂಬಂಧಿಕರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ; ಭಾವನನ್ನೇ ಕೊಂದ ಪತ್ನಿಯ ಸಹೋದರರು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಬಂಧಿಕರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ; ಭಾವನನ್ನೇ ಕೊಂದ ಪತ್ನಿಯ ಸಹೋದರರು….?

ಕಲಬುರ್ಗಿ: ವ್ಯಕ್ತಿಯೋರ್ವನನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಬಸಂತ ನಗರದಲ್ಲಿ ನಡೆದಿದೆ.

ಲಕ್ಷ್ಮಿಪುತ್ರ(45) ಕೊಲೆಯಾದ ವ್ಯಕ್ತಿ. ಹಣಕಾಸಿನ ವಿಚಾರವಾಗಿ ಸಂಬಂಧಿಕರಿಂದಲೇ ಲಕ್ಷ್ಮಿಪುತ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದಿಬಂದಿದೆ.

ಲಕ್ಷ್ಮಿಪುತ್ರನ ಪತ್ನಿಯ ಸಹೋದರರಾದ ಶಿವಕಾಂತ್ ಹಾಗೂ ಪ್ರಸಾದ್ ಎಂಬುವವರು ಭಾವನನ್ನೇ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಲಕ್ಷ್ಮಿಪುತ್ರ ಸಂಬಂಧಿಗಳಿಗೆ 8 ಲಕ್ಷ ರೂಪಾಯಿ ಹಣ ನೀಡಿದ್ದ. ಹಣ ವಾಪಸ್ ಕೇಳಿದ್ದಕ್ಕೆ ಇದೀಗ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...